Home Crime ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್‌ಐ ಕೈವಾಡ ಶಂಕೆ : ಕೃತ್ಯಕ್ಕೆ 50ಲಕ್ಷ ರೂ ಹಣ...

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್‌ಐ ಕೈವಾಡ ಶಂಕೆ : ಕೃತ್ಯಕ್ಕೆ 50ಲಕ್ಷ ರೂ ಹಣ ಹೂಡಿಕೆ ಆರೋಪ : ಕೆ.ಟಿ. ಉಲ್ಲಾಸ್…!!

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆ ಮೇಲೆ ನೇರ ಅನುಮಾನವಿದೆ. ಕೃತ್ಯಕ್ಕಾಗಿ 50 ಲಕ್ಷಕ್ಕೂ ಹೆಚ್ಚು ಮೊತ್ತದ ಹಣ ಹೂಡಿಕೆಯಾಗಿದ್ದು, ಇದರ ಹಿಂದೆ ದೊಡ್ಡ ಶಕ್ತಿ ಕೆಲಸ ಮಾಡಿದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ. ಉಲ್ಲಾಸ್ ಆರೋಪ ಮಾಡಿದರು.

ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಉಲ್ಲಾಸ್ ಅವರು, ಪಿಎಫ್‌ಐನ ಟಾರ್ಗೆಟೆಡ್ ಕಿಲ್ಲಿಂಗ್ ಈ ಪ್ರಕರಣದಲ್ಲೂ ನಡೆದಿದೆ. ಸುಖಾನಂದ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಈ ಪ್ರಕರಣಕ್ಕೆ ಫಂಡಿಂಗ್ ಮಾಡಿದ್ದಾನೆ. ಘಟನಾ ಸ್ಥಳದಲ್ಲಿ ಪಿಎಫ್‌ಐ ಕಾರ್ಯಕರ್ತರು ಇದ್ದರು ಎನ್ನುವ ಬಲವಾದ ಮಾಹಿತಿಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದರು.

ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನವಿದೆ. ಒಂದು ತಿಂಗಳಿಂದ ಅವರು ಸುಹಾಸ್‌ ಗೆ ಕರೆ ಮಾಡಿ ಹಿಂಸೆ ಕೊಡುತ್ತಿದ್ದರು. ಅವರನ್ನೂ ತನಿಖೆಗೆ ಒಳಪಡಿಸಬೇಕು. ಕಳಸದ ರಂಜಿತ್ ಮತ್ತು ನಾಗರಾಜ್‌ನನ್ನು ಸುಳ್ಳು ಹೇಳಿ ಕರೆಸಿ ಕೃತ್ಯದಲ್ಲಿ ಶಾಮೀಲು ಮಾಡಿಸಿದ್ದಾರೆ. ಹಿಂದೂಗಳು ಇರುವ ಕಾರಣ ಪ್ರಕರಣಕ್ಕೆ ಎನ್‌ಐಎ ಆ್ಯಂಗಲ್ ಬರಬಾರದು ಎಂದು ಈ ಉಪಾಯ ಮಾಡಿದ್ದಾರೆ. ನಮಗೆ ರಾಜ್ಯ ಪೊಲೀಸರ ಸಾಮರ್ಥ್ಯದ ಬಗ್ಗೆ ಅನುಮಾನ ಇಲ್ಲ; ಆದರೆ ಸಿಎಂ, ಡಿಸಿಎಂ ಗೃಹ ಸಚಿವರ ಬಗ್ಗೆ ನಂಬಿಕೆ ಇಲ್ಲ ಎಂದು ಕೆ.ಟಿ. ಉಲ್ಲಾಸ್ ಹೇಳಿದರು.