ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ರಕ್ಷಿಸಿದ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಮತ್ತವರ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್ ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗಳೊಂದಿಗೆ ತಣ್ಣೀರುಬಾವಿ ಬೀಚ್ ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಹೆಂಡತಿಯ ಜೊತೆ ಜಗಳವುಂಟಾಗಿ ಗಂಡ ತನ್ನ ನಾಲ್ಕು ವರ್ಷದ ಹೆಣ್ಣು ಮಗುವಿನ ಜೊತೆಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದು ಅದರ ವಿಡಿಯೋ ಮಾಡಿ ವಾಟ್ಸಪ್ ಗ್ರೂಪಿಗೆ ಹಾಕಿದ್ದಲ್ಲದೆ ಬಳಿಕ ತನ್ನ ಮನೆಗೆ ಬಂದು ನೇಣು ಹಾಕಲು ಯತ್ನಿಸಿದಾಗ ಪೊಲೀಸರು ಸಕಾಲಿಕವಾಗಿ ಎಚ್ಚತ್ತುಕೊಂಡು ಆತನನ್ನು ರಕ್ಷಿಸಿದ ಘಟನೆ ಕಾವೂರಿನಲ್ಲಿ ಸಂಭವಿಸಿದೆ.





