Home Art & Culture ಉಡುಪಿ ಮೂಲದ ಖಳನಟ ಹರೀಶ್ ರಾಯ್ ನಿಧನ….!!

ಉಡುಪಿ ಮೂಲದ ಖಳನಟ ಹರೀಶ್ ರಾಯ್ ನಿಧನ….!!

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು.

ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ ಯಶ್ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು. ಕ್ಯಾನ್ಸರ್ ಮಹಾಮಾರಿಯಿಂದ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹರೀಶ್ ರಾಯ್ ವಿಧಿವಶರಾಗಿದ್ದಾರೆ.

ಹರೀಶ್ ರಾಯ್ ತನ್ನ ಕಾಲೇಜು ದಿನಗಳಲ್ಲಿ ರೌಡಿಸಂ ಮಾಡುತ್ತಿದ್ದರು. ರೌಡಿ ಬನ್ನಂಜೆ ರಾಜನ ತಂಡಕ್ಕೂ ಹರೀಶ್ ರಾಯ್ ತಂಡಕ್ಕೆ ಯಾವಾಗಲೂ ಹೊಡೆದಾಟ ನಡೆಯುತ್ತಿತ್ತು. ಇವರ ನಡುವೆ ಆ ಸಮಯದಲ್ಲಿ ಚಾಕು ಇರಿತ ಪ್ರಕರಣ ದಾಖಲಾಗಿತ್ತು. ನಂತರ ಉಡುಪಿಯಲ್ಲಿ ನಡೆದಿದ್ದ ಬಚಿರೆ‌ ಮಾಸ್ಟರ್ ಕೊಲೆ ಪ್ರಕರಣದಲ್ಲಿ ಹರೀಶ್ ರಾಯ್ ಆರೋಪಿಯಾಗಿ ಜೈಲು ಪಾಲಾಗಿದ್ದರು.

ನಟ ನಿರ್ದೇಶಕ ಉಪೇಂದ್ರ ಅವರ ಪರಿಚಯವಾಗಿ ಅವರಿಗೆ ಒಂದು ಕಾರು ಕೂಡ ಆ ಸಮಯದಲ್ಲಿ ಕೊಟ್ಡಿದ್ದರು. ಉಪೇಂದ್ರ ಅವರ ಸಹಾಯದಿಂದ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಖಳನಟನಾಗಿ ಪಾತ್ರಗಳಲ್ಲಿ ನಟಿಸುತ್ತಿದ್ದರು.

90 ರ ದಶಕದಲ್ಲಿ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ,ಮೀಂದುಮ್ ಒರು ಕಾದಲ್ ಕಧೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ,ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.