ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ತಿಳಿಯಲಾಗಿದೆ.
ಒಂಭತ್ತನೆ ತರಗತಿಯಲ್ಲಿ ಓದುತ್ತಿದ್ದ ಬಾಲಕ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ. ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿತ್ತು. ಮಹಜರು ನಡೆಸಿದ ಬಳಿಕ ಮನೆಯವರಿಗೆ ಮೃತದೇಹ ಹಸ್ತಾಂತರ ಮಾಡಲಾಯಿತು. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



