Home Crime ಹೊಳೆಯಲ್ಲಿ ಮೀನು ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವು…!!

ಹೊಳೆಯಲ್ಲಿ ಮೀನು ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವು…!!

ಅಮಾಸೆಬೈಲು: ಉಡುಪಿ ಜಿಲ್ಲೆಯ ಅಮಾಸೆಬೈಲು ಸಮೀಪ ಹೊಳೆಯಲ್ಲಿ ಮೀನು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮೃತಪಟ್ಟ ಯುವಕ ಸುರೇಶ ನಾಯ್ಕ ಎಂದು ತಿಳಿಯಲಾಗಿದೆ.

ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ: ಪಿರ್ಯಾದಿದಾರರಾದ ಗುರ್ಕಯ ನಾಯ್ಕ (56), ಹೆಂಗವಳ್ಳಿ ಗ್ರಾಮ ಕುಂದಾಪುರ ಇವರ ಮಗ ಸುರೇಶ ನಾಯ್ಕ (29) ರವರು ಹೆಬ್ರಿ ತಾಲೂಕು ಶೇಡಿಮನೆ ಗ್ರಾಮದ ಜೆ.ಜೆ. ಎಸ್ಠೇಟ್‌ ಪಕ್ಕ ಮಾವಿನ ಕಾಡು ವಿಮಲನದಿಯಲ್ಲಿ ದಿನಾಂಕ 09/11/2025 ರಂದು ಬೆಳಿಗ್ಗೆ ತಮ್ಮ ಗೆಳೆಯರೊಂದಿಗೆ ಹೆಂಗವಳ್ಳಿ ಶೇಡಿಮನೆ ಪರಿಸರದಲ್ಲಿ ಹೊಳೆಯಲ್ಲಿ ಮೀನು ಹಿಡಿಯಲು ಹೋದ ಸಮಯ 10:00 ಗಂಟೆಯಿಂದ 16:00 ಗಂಟೆಯ ಮದ್ಯಾವಧಿಯಲ್ಲಿ ಅಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುತ್ತಾರೆ.

ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 14/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.