Home Crime ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಇಬ್ಬರ ಬಂಧನ…!!

ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಇಬ್ಬರ ಬಂಧನ…!!

ಮಲ್ಪೆ : ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಪ್ರಕರಣದ ವಿವರ: ಕೊಚ್ಚಿನ್‌ ಶಿಪ್ಯಾರ್ಡ್‌, ಮಲ್ಪೆ ಇದು ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಬರುವ ಒಂದು ಸಂಸ್ಥೆಯಾಗಿರುತ್ತದೆ.
ಈ ಸಂಸ್ಥೆಯಿಂದ M/S Shushma Marine Private Limited ಎಂಬ ಸಂಸ್ಥೆಯ ಸಬ್‌ಕಂಟ್ರಾಕ್ಟ ಹೊಂದಿದ್ದು, ಈ ಸಂಸ್ಥೆಯಲ್ಲಿ ಉತ್ತರಪ್ರದೇಶ ರಾಜ್ಯದ ರೋಹಿತ್‌ ಎಂಬಾತನು ಇನ್ಸುಲೇಟರ್‌ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.ಈತನು ಈ ಹಿಂದೆ ಕೇರಳ ರಾಜ್ಯದ ಕೊಚ್ಚಿ ಯಲ್ಲಿರುವ ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ನಲ್ಲಿ ಕೆಲಸ ಮಾಡಿಕೊಂಡಿದ್ದು, ಕೇರಳದ ಕೊಚ್ಚಿನ್‌ ಶಿಪ್‌ಯಾರ್ಡ್‌ ನಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳನ್ನು ನಿರ್ಮಾಣ ಮಾಡುತ್ತಿರುವುದಾಗಿದೆ.ರೋಹಿತ್‌ನು ಕೇರಳದಲ್ಲಿ ಕೆಲಸ ಮಾಡುವಾಗ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬ್ರಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುತ್ತಾನೆ.

ನಂತರ ಮಲ್ಪೆಯಲ್ಲಿರುವ ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ಗೆ ಬಂದ ನಂತರವೂ ಆತನು ಕೊಚ್ಚಿಯಲ್ಲಿರುವ ಆತನ ಸ್ನೇಹಿತನಿಂದ ಮಾಹಿತಿ ಪಡೆದು, ಪುನಃ ವಾಟ್ಸಪ್‌ ಮೂಲಕ ಅನಧಿಕೃತ ವ್ಯಕ್ತಿಗೆ ಶೇರ್‌ ಮಾಡಿ, ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡುವ ಮತ್ತು ಆಂತರಿಕ ಭಧ್ರತೆಗೆ ಧಕ್ಕೆ ತರುವ ಕೆಲಸ ಮಾಡಿರುತ್ತಾನೆ.

ಈ ಬಗ್ಗೆ ಸಿಇಓ, ಉಡುಪಿ ಕೊಚ್ಚಿನ್‌ ಶಿಪ್ಯಾರ್ಡ್‌, ಮಲ್ಪೆ ಇವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ : 128/2025, ಕಲಂ:152 BNS, ಕಲಂ:3,5 OFFICIAL SECRETS ACT, 1923ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದ ತನಿಖೆಯನ್ನು ಕೈಗೊಂಡ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಹರ್ಷ ಪ್ರಿಯಂವದಾ ಐಪಿಎಸ್‌ ರವರ ನೇತೃತ್ವದ ಮಲ್ಪೆ ಪೊಲೀಸ್‌ ಉಪನಿರೀಕ್ಷಕರಾದ ಅನೀಲ್‌ ಕುಮಾರ್‌ ಡಿ, ಎಎಸ್‌ಐ ಹರೀಶ್‌, ಪಿಸಿ ರವಿ ಜಾಧವ್‌ ತಂಡ ಆರೋಪಿಗಳಾದ 1) ರೋಹಿತ್‌ (29), ತಂದೆ : ಲಲ್ಲೆ, ಅನಂತರಾಮ್‌ ಭಟ್‌ಪುರ, ಸುಲ್ತಾನ್‌ಪುರ ಜಿಲ್ಲೆ, ಉತ್ತರ ಪ್ರದೇಶ, 2) ಸಂತ್ರಿ(37), ತಂದೆ: ಬರ್ಸಾತಿ, ಹಂಜಾಬಾದ್‌ ಮೈಂದಾನ್‌, ಸುಲ್ತಾನ್‌ಪುರ ಜಿಲ್ಲೆ, ಉತ್ತರ ಪ್ರದೇಶ ರವರನ್ನು ದಸ್ತಗಿರಿ ಮಾಡಿರುತ್ತಾರೆ.

ಆರೋಪಿಗಳನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ 03/12/2025ರ ವರೆಗೆ ನ್ಯಾಯಾಂಗ ಬಂದನ ನೀಡಿರುತ್ತದೆ.