ಕಡಬ : ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.
ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದು ಎಂದಿನಂತೆ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಅಲ್ಲೇ ಅಸ್ವಸ್ಥಗೊಂಡು ಬೊಬ್ಬೆ ಹಾಕಿದ್ದಾರೆ. ಇದನ್ನು ಕೇಳಿಸಿಕೊಂಡ ಸ್ಥಳೀಯರು ಮರ ಹತ್ತಿದಾಗ ಅವರು ಉಸಿರಾಡುತ್ತಿದ್ದರು, ಬಳಿಕ ಅಗ್ನಿಶಾಮಕ ದಳದವರು ಬಂದ ಮೇಲೆ ಸ್ಥಳೀಯರೋರ್ವರು ಮರ ಹತ್ತಿ ನೋಡಿದಾಗ ಅವರು ಮೃತ ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಿಂದ ಮೃತ ದೇಹವನ್ನು ಕೆಳಗಿಳಿಸಿದ್ದಾರೆ.



