Home Crime ಕಾರವಾರ : ಭೀಕರ ರಸ್ತೆ ಅಪಘಾತ : ಧಾರವಾಡ ಮೂಲದ ಆರು ಸ್ವಿಗ್ಗಿ ಡೆಲಿವರಿ ಬಾಯ್ಸ್...

ಕಾರವಾರ : ಭೀಕರ ರಸ್ತೆ ಅಪಘಾತ : ಧಾರವಾಡ ಮೂಲದ ಆರು ಸ್ವಿಗ್ಗಿ ಡೆಲಿವರಿ ಬಾಯ್ಸ್ ಬಲಿ…!!

ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ‘ಸ್ವಿಗ್ಗಿ’ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ತೂಫಾನ್ ವಾಹನದಲ್ಲಿದ್ದ ಆರು ಜನರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ​ಬಸವರಾಜ್ (48 ವರ್ಷ), ​ಅಭಿಷೇಕ್ ಈಶ್ವರ್ (28 ವರ್ಷ), ​ಅಕ್ಷಯ (26 ವರ್ಷ), ​ಅಭಿಷೇಕ್ (26 ವರ್ಷ), ​ಸಂಜೀವ/ಸಂಜಯ ಅಂಗಡಿ (33 ವರ್ಷ – ವಾಹನ ಚಾಲಕ), ​ಮಂಜುನಾಥ ಚುಲಕಿ (32 ವರ್ಷ) ಎಂದು ಗುರುತಿಸಲಾಗಿದೆ.

ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ ಹೊರಟಿದ್ದಾಗ ಈ ಘೋರ ದುರಂತ ಸಂಭವಿಸಿದೆ. ತೂಫಾನ್ ವಾಹನದಲ್ಲಿ (KA19AA5920) ಚಾಲಕ ಸೇರಿದಂತೆ ಒಟ್ಟು 9 ಜನರಿದ್ದರು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA22AA1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.