Home Crime ಬೆಳ್ತಂಗಡಿ: ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!

ಬೆಳ್ತಂಗಡಿ: ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿರುವ ಘಟನೆ ವಾಮದಪದವಿನಲ್ಲಿ ಸಂಭವಿಸಿದೆ.

ಇಲ್ಲಿನ ಜನವಸತಿ ಇಲ್ಲದ ಜಾಗದ ಪಾಳು ಬಾವಿಯಲ್ಲಿ ಡಿ. 3ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮಂಗಳೂರು ತಾಲೂಕಿನ ಉಳ್ಳಾಲ ಕಾಪಿಕಾಡ್ ನಿವಾಸಿ ಮನ್ವಿತ್ ಅವರು ತನ್ನ ತಂದೆಯ ಈ ಖಾಲಿ ನಿವೇಶನದ ಅಳತೆ ಮಾಡುವ ಉದ್ದೇಶದಿಂದ ಕಾರ್ಮಿಕರ ಮೂಲಕ ಪೊದೆ, ಹುಲ್ಲನ್ನು ಸ್ವಚ್ಛಗೊಳಿಸುತ್ತಿದ್ದಾಗ ಬಾವಿಯ ಒಳಗೆ ಮೃತದೇಹ ಕಂಡುಬಂದಿದೆ.

ಅಪರಿಚಿತ ವ್ಯಕ್ತಿಯು ಸುಮಾರು 50-60 ವರ್ಷ ಪ್ರಾಯದವನಾಗಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.