Home Crime ಬೈಂದೂರು : ಬಸ್ ಹಾಗೂ ಬೈಕ್ ನಡುವೆ ಅಪಘಾತ : ಸವಾರ ಸಾವು…!!

ಬೈಂದೂರು : ಬಸ್ ಹಾಗೂ ಬೈಕ್ ನಡುವೆ ಅಪಘಾತ : ಸವಾರ ಸಾವು…!!

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಗೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ನಾಗರಾಜ ಖಾರ್ವಿ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ವಿವರ : ಪಿರ್ಯಾದಿದಾರರಾದ ಶ್ರೀಧರ ಖಾರ್ವಿ (33) ದುರ್ಗಾ ಖಾರ್ವಿ ಉಪ್ಪುಂದ ಬೈಂದೂರು ಇವರು ದಿನಾಂಕ 06/12/2025 ರಂದು ರಾತ್ರಿ 10:15 ಗಂಟೆಯ ಸಮಯಕ್ಕೆ ಅವರ ಸ್ನೇಹಿತರಾದ ಗಂಗಾಧರ ಖಾರ್ವಿ ಯವರೊಂದಿಗೆ ಉಪ್ಪುಂದ ಕಂಬದಕೋಣೆ ಸೊಸೈಟಿಯ ಎದುರು ಉಪ್ಪುಂದದ ಉಪ್ಪಿನಕೋಟೆ ಕಡೆಗೆ ಹೋಗುವ ರಸ್ತೆಯ ತಿರುವಿನಲ್ಲಿ ನಿಂತುಕೊಂಡಿರುವಾಗ ರಾ ಹೆ 66 ರ ಪಶ್ಚಿಮ ಪಥದ ರಸ್ತೆಯಲ್ಲಿ ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ KA-51 AF-1101 ಗಣೇಶ ಟ್ರಾವೆಲ್ಸ್ ಬಸ್ಸನ್ನು ಅದರ ಚಾಲಕ ಶಿವರಾಜ ಬಸ್ಸನ್ನು ಅತೀ ವೇಗ ಹಾಗೂ ಅಜಾಗೂರಕತೆಯಿಂದ ರಸ್ತೆಯ ತೀರ ಎಡ ಭಾಗಕ್ಕೆ ಚಲಾಯಿಸಿಕೊಂಡು ಬಂದು ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ KA-20 W-9845 ನೇ ಮೋಟರ್ ಸೈಕಲ್ ಸವಾರ ನಾಗರಾಜ ಖಾರ್ವಿ ರವರಿಗೆ ಡಿಕ್ಕಿ ಹೋಡೆದ ಪರಿಣಾಮ ನಾಗರಾಜ ಖಾರ್ವಿಯವರ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿ ತೆಲೆಯ ಭಾಗ ಒಡೆದು ಹೋಗಿದ್ದು ಫಿರ್ಯಾಧಿದಾರರು ಅವರನ್ನು ಕೂಡಲೇ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ರಾತ್ರಿ 11:10 ಗಂಟೆಗೆ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ

ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 207/2025 ಕಲಂ: 281, 106 BNS ರಂತೆ ಪ್ರಕರಣ ದಾಖಲಾಗಿರುತ್ತದೆ.