ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇನ್ನೋವಾ ಕಾರು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ನಿವಾಸಿ ದಿನಕರ ಪೂಜಾರಿ ಎಂದು ತಿಳಿದು ಬಂದಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಸಾರಾಂಶ : ದಿನಾಂಕ 10/12/2025 ರಂದು ಸಂಜೆ 7:05 ಗಂಟೆಗೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಗ್ರೀನ್ಲ್ಯಾಂಡ್ ಫ್ಯಾಕ್ಟರಿಯ ಬಳಿ ದಿನಕರ ಪೂಜಾರಿ (50) ಎಂಬುವವರು ಅಯ್ಯಪ್ಪನಗರ ಕಡೆಯಿಂದ ಜಾರ್ಕಳ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ MH-43-BB-7171 ನೇ ಇನ್ನೋವಾ ಕಾರಿನ ಚಾಲಕ ನಾಗೇಶ್ ಪೈ ತನ್ನ ಇನ್ನೋವಾ ಕಾರನ್ನು ಅತೀವೇಗ ಹಾಗೂ ನಿಲರ್ಕ್ಷತನದಿಂದ ರಸ್ತೆಯ ಎಡಬದಿಗೆ ಚಲಾಯಿಸಿಕೊಂಡು ಬಂದು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಿನಕರ ಪೂಜಾರಿಯವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಿನಕರ ಪೂಜಾರಿಯವರು ಡಾಮಾರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ತೀವ್ರ ರೀತಿಯ ರಕ್ತಗಾಯಗೊಂಡವರನ್ನು ಚಿಕಿತ್ಸೆಯ ಬ್ಗಗೆ ಕಾರ್ಕಳ ಸರಕಾರಿ ಅಸ್ಪತ್ರೆಗೆ ಕರೆ ತರುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 171/2025 ಕಲಂ: 281, 106 BNS ರಂತೆ ಪ್ರಕರಣ ದಾಖಲಾಗಿರುತ್ತದೆ.



