Home Crime ರಸ್ತೆ ಅಪಘಾತ- ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಸಾವು..!!

ರಸ್ತೆ ಅಪಘಾತ- ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಸಾವು..!!

ಸುಳ್ಯ : ಅರಂತೋಡಿನ ಕುಲ್ತಾರ್ ಬಳಿ ಬುಧವಾರ ರಾತ್ರಿ ಮೋಟಾರ್ ಸೈಕಲ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 17 ವರ್ಷದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೃತನನ್ನು ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಬಾಣ ಸುಬ್ರಾಯ ಅವರ ಪುತ್ರ ಸಂತೋಷ್ (17) ಎಂದು ಗುರುತಿಸಲಾಗಿದೆ.

ಅವರು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯು ವಿದ್ಯಾರ್ಥಿಯಾಗಿದ್ದರು. ಅಪಘಾತದ ನಂತರ, ಶರತ್ ಅಡ್ಯಡ್ಕ ಅವರು ಸ್ಥಳೀಯ ನಿವಾಸಿಗಳ ಸಹಾಯದಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ನಂತರ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.