Home Crime ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆ…!!

ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆ…!!

ಉಡುಪಿ: ಬಸ್ ಏಜೆಂಟೊಬ್ಬರು‌ ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಎಂದು‌ ಗುರುತಿಸಲಾಗಿದೆ.

ಸಮಾಜಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದರು. ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ನಗರ ಪೋಲಿಸ್ ಠಾಣೆಯ ಎಸ್. ಐ ನಾರಾಯಣ, ಹೆಡ್ ಕಾನ್ಸ್ಟೇಬಲ್ ನೇತಾವತಿ ಕಾನೂನು ಪ್ರಕ್ರಿಯೆ ನಡೆಸಿದರು.