Home Crime ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತ್ಯು…!!

ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತ್ಯು…!!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಸೀತಾ ನದಿಯ ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಸಾವನ್ನಪ್ಪಿದ ಯುವಕ ದೇವರಾಜ್ ಎಂದು ಗುರುತಿಸಲಾಗಿದೆ.

ಈ ಘಟನೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ : ಪಿರ್ಯಾಧಿ ಶಿವರಾಮ ರಾಯ (57) ನಡೂರು ಗ್ರಾಮ, ಬ್ರಹ್ಮಾವರ ಇವರ ತಂಗಿ ಪದ್ಮಾವತಿ ಇವರ ಮಗ ದೇವರಾಜ ಪ್ರಾಯ: 35 ವರ್ಷ ಎಂಬವರು ನಡೂರು ಬಳಿ ಇರುವ ಸೀತಾ ನದಿಯ ಡ್ಯಾಂ ಬಳಿ ದಿನಾಂಕ: 13/01/2026 ರಂದು ಸಂಜೆ ಸುಮಾರು 4:00 ಗಂಟೆಗೆ ಸ್ನಾನಕ್ಕೆ ಹೋದವರು ನದಿಯಲ್ಲಿ ಸ್ನಾನ ಮಾಡುತ್ತೀರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಯು.ಡಿ.ಆರ್ 03/2026 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.