Home Karavali Karnataka ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ : ರೌಡಿಶೀಟರ್ ಗೆ ಕುಕ್ಕೆ ಅಧ್ಯಕ್ಷ...

ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ : ರೌಡಿಶೀಟರ್ ಗೆ ಕುಕ್ಕೆ ಅಧ್ಯಕ್ಷ ಸ್ಥಾನವೆಂದು ಬಿಜೆಪಿ ಆರೋಪ…!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಎಂಎಲ್‌ಸಿ ಮಂಜುನಾಥ ಭಂಡಾರಿ ಹರೀಶ್ ಇಂಜಾಡಿ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿದ್ದರು.

ಮೂಲತಃ ಕಡಬ ತಾಲೂಕಿನ ನಿವಾಸಿಯಾಗಿರುವ ಹರೀಶ್ ಇಂಜಾಡಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ. ಅವರ ಆಯ್ಕೆಗೂ ಮೊದಲು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕುಮಾರ್ ಕರಿಕ್ಕಳ ಅವರ ಹೆಸರನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಶಿಫಾರಸು ಮಾಡಿದ್ದರು. ಆದರೆ ಇವರನ್ನು ಆಯ್ಕೆ ಮಾಡುವುದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಮತ್ತು ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಹರೀಶ್ ಇಂಜಾಡಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಹರೀಶ್ ಇಂಜಾಡಿ ಮೇಲೆ ಅನೇಕ ಆರೋಪಗಳು ಕೇಳಿ ಬಂದಿವೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲದ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇದೆ. ಇದೇ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು. ಆದ್ದರಿಂದ ಹರೀಶ್ಗೆ ಅಧ್ಯಕ್ಷ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರು ವಿರೋಧಿಸಿದ್ದರು. ಅಲ್ಲದೆ ಮರಳು‌ ಮಾಫಿಯಾ ಮತ್ತು ಮರ ಕಳ್ಳ ಸಾಗಾಣೆ ಆರೋಪಿಸಿ ದಾಖಲೆ ಸಮೇತ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸುಬ್ರಹ್ಮಣ್ಯ ಗ್ರಾಮಸ್ಥರು ಪತ್ರ‌ ಬರೆದಿದ್ದರು. ಆದರೆ ಗ್ರಾಮಸ್ಥರ ಮನವಿಯನ್ನು ಲೆಕ್ಕಿಸದೆ ಹರೀಶ್ ಇಂಜಾಡಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆಡಳಿತ ಮಂಡಳಿ ಸದ್ಯಸ್ಯರಾಗಲು ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಆಗಬಾರದು ಎನ್ನುವ ನಿಯಮ ಮೀರಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಆಕ್ರೋಶ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.

ʼರೌಡಿಶೀಟರ್ಗೆ ನಾಗ ಕ್ಷೇತ್ರ ರಾಜ್ಯದ ನಂ. 1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಮಿತಿ ಅಧ್ಯಕ್ಷ ಸ್ಥಾನ. ರೌಡಿ ಭಾಗ್ಯ’. ‘ರೌಡಿಶೀಟರ್ ಮನೆಗೆ ಭೇಟಿ ನೀಡಲ್ಲ ಎಂದು ಹೇಳುತ್ತಿದ್ದ ಸರಕಾರ ಇಂದು ರೌಡಿ ಶೀಟರ್ಗೆ ಅಧ್ಯಕ್ಷ ಸ್ಥಾನ ಕೊಟ್ಟಿದೆ’. ‘ಇದಕ್ಕೂ ಮೊದಲು ಕುಕ್ಕೆ ದೇವಸ್ಥಾನಕ್ಕೆ ವಂಚನೆ ಮೋಸ ಮಾಡಿರುವ ಪ್ರಕರಣಗಳು ಇವರ ಮೇಲಿದೆ. ಇದೀಗ ಅಧ್ಯಕ್ಷ ಸ್ಥಾನ ಕೊಟ್ಟು ದೇವಸ್ಥಾನವನ್ನು ಏನು ಮಾಡುತ್ತಾರೆ ನೋಡಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.