ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್ ಅವರನ್ನು ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯೊಬ್ಬರನ್ನು ಅಪ್ಪಿಕೊಂಡು ಮುತ್ತಿಡುತ್ತಿದ್ದ ಹಸಿಬಿಸಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಚೇರ್ ಮೇಲೆ ಕುಳಿತು ಮಹಿಳೆಯನ್ನು ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ.
ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತದೆ.



