ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕುದ್ರೋಳಿ ಭಾರತ್ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ ಚಿರಪರಿಚತರಾಗಿದ್ದರು.
ತೀವ್ರ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜ.20 ರಂದು ಉರ್ವದ ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.



