Home Latest ಸೆ.30: ಶ್ರೀ ನಾರಾಯಣಗುರುಗಳ ಜನ್ಮಜಯಂತಿ : ಗುರು ಸಂದೇಶ ಸಾಮರಸ್ಯ ಜಾಥಾ,ರಾಜ್ಯ ಮಟ್ಟದ ಭಾಷಣ ಸ್ಪರ್ಧೆ…!!

ಸೆ.30: ಶ್ರೀ ನಾರಾಯಣಗುರುಗಳ ಜನ್ಮಜಯಂತಿ : ಗುರು ಸಂದೇಶ ಸಾಮರಸ್ಯ ಜಾಥಾ,ರಾಜ್ಯ ಮಟ್ಟದ ಭಾಷಣ ಸ್ಪರ್ಧೆ…!!

ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯು ಸೆ.30ರಂದು ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಳಿಗ್ಗೆ 9 ಗಂಟೆಗೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಷಣ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಎಸ್. ಕೆ. ಸಾಲ್ಯಾನ್ ಬೆಳ್ಳಣ್, ಮಲ್ಪೆ ಸಾಯಿಶ್ಯಾಮ್ ಬೋಟ್ ಹರೀಶ್, ಮಣಿಪಾಲ ಉದಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ರಮೇಶ್ ಎ. ಬಂಗೇರ, ಗ್ರೂಪ್ ಆಫ್ ಶಿವಸಾಗರ್ ಆಡಳಿತ ನಿರ್ದೇಶಕ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ಡೆ, ಉಡುಪಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಆದಿಉಡುಪಿ ಇದರ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ, ಮಣಿಪಾಲ ಬಬ್ಬುಸ್ವಾಮಿ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ, ಕಂಗಣಬೆಟ್ಟು ಶ್ರೀ ಭ.ತೀ.ಭಕ್ತ ವೃಂದ (ರಿ.),ಕಟ್ಟಡ ಸಮಿತಿ ಅಧ್ಯಕ್ಷ ವಿಶ್ವನಾಥ್ ಬೆಟ್ಟಡ,ತೋನ್ಸೆ ಬ್ರಹ್ಮ ಬೈದರ್ಕಳ ಪಂಚಧೂಮಾವತೀ ಗರೋಡಿಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಜತ್ತನ್, ಬಿಲ್ಲವ ಸಂಘ ಪಡುಬಿದ್ರಿ ಇದರ ಅಧ್ಯಕ್ಷ ವೈ. ಸುಧೀರ್ ಪಡುಬಿದ್ರಿ, ಬಿಲ್ಲವ ಸೇವಾ ಸಂಘ (ರಿ.) ಸಂತೆಕಟ್ಟೆ ಇದರ ಗೌರವಾಧ್ಯಕ್ಷ ಭಾಸ್ಕರ್ ಜತ್ತನ್, ಉದ್ಯಮಿ ಶ್ರೀ ಸೂರಜ್ ಪೂಜಾರಿ ಮಲ್ಪೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್ ಸನಿಲ್ ಉಪಸ್ಥಿತರಿರುವರು.

ಮಧ್ಯಾಹ್ನ ರಾಜ್ಯಮಟ್ಟದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದ್ದು, ಅಂದು್ ಮಧ್ಯಾಹ್ನ 2 ಗಂಟೆಗೆ ಬನ್ನಂಜೆ ಸಾಮರಸ್ಯ ಜಾಥಾಕ್ಕೆ ಚಾಲನೆ ನೀಡಲಾಗುವುದು. ಜಾಥಾಕ್ಕೆ ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ಬರೆದ ವಿದುಷಿ ದೀಕ್ಷಾ, ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ, ಎಸ್,ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ, ಅಂತರಾಷ್ಟ್ರೀಯ ಯೋಗ ಪಟು ತನುಶ್ರೀ ಹಾಗೂ ರಾಷ್ಟ್ರೀಯ ಕರಾಟೆಪಟು ಛಾಯಾ ಎಸ್. ಪೂಜಾರಿ ಚಾಲನೆ ನೀಡಲಿದ್ದಾರೆ.

ಗುರು ಸಂದೇಶ ಸಾಮರಸ್ಯ ಜಾಥಾವು ಬನ್ನಂಜೆ ಬಿಲ್ಲವ ಸಂಘ-ಎಸ್ಪಿ ಆಫೀಸ್ ರಸ್ತೆ- ಉದ್ಯಾವರ-ಕಟಪಾಡಿ- ಕಾಪು-ಮೂಳೂರು- ಪಡುಬಿದ್ರಿ- ಹೆಜಮಾಡಿ-ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರಕ್ಕೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಆರೋಗ್ಯ ಸಚಿವ ಯು.ಟಿ ಖಾದರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಕಾಂಚನ ಹುಂಡೈನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸಾದ್ ರಾಜ್ ಕಾಂಚನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್ ಅಂಚನ್, ಕುಂಜಿಬೆಟ್ಟು ವೈಕುಂಟ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಖಾ, ಮೂಲ್ಕಿ ಬಿಲ್ಲವರ ಮಹಾಮಂಡಳದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಹೆಜಮಾಡೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸಾಧು ಸಾಲ್ಯಾನ್, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷ ಶಶಿಧರ್ ಅಮೀನ್, ಬ್ರಹ್ಮಾವರ ಬಿಲ್ಲವರ ಸಂಘದ ಅಧ್ಯಕ್ಷ ಬಿ.ಎನ್ ಶಂಕರ ಪೂಜಾರಿ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಲ್ ಕುಮಾರ್ ಕಾರ್ಕಳ, ಕಾಪು ಬಿಲ್ಲವ್ಚ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ ಬೈಂದೂರು, ಹೆಬ್ರಿ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ಬೇಳಂಜೆ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಗೌರವಾಧ್ಯಕ್ಷ ದಿವಾಕರ್ ಸನಿಲ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮಲ್ಪೆ, ವಿಜಯಕೋಟ್ಯಾನ್ ಪಿತ್ರೋಡಿ, ಗೌರವ ಸಲಹೆಗಾರರಾದ ಸುಧಾಕರ್ ಡಿ ಅಮೀನ್ ಉಪಸ್ಥಿತರಿದ್ದರು.