Home Crime ಮಾದಕವಸ್ತು ಸೇವಿಸಿ ನಂತರ ಮಾರಾಟ : ಮೂವರು ಆರೋಪಿಗಳ ಬಂಧನ…!!

ಮಾದಕವಸ್ತು ಸೇವಿಸಿ ನಂತರ ಮಾರಾಟ : ಮೂವರು ಆರೋಪಿಗಳ ಬಂಧನ…!!

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಾದಕ ವಸ್ತು (ಎಂಡಿಎಂಎ) ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ನಂದಾವರ ಬಸ್ತಿಗುಡ್ಡೆ ನಿವಾಸಿಗಳಾದ ಮೊಹಮ್ಮದ್ ಇಮ್ತಿಯಾಜ್ , ಯೂನುಸ್ ಹಾಗೂ ಪುತ್ತೂರು ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ. ಸೊತ್ತು ಹಾಗೂ ಖಾಲಿ 5 ಪ್ಲಾಸ್ಟಿಕ್ ಕವರ್, ರೂ.30 ಲಕ್ಷ ಮೌಲ್ಯದ ಕಾರು, ಆರೋಪಿಗಳ ಕೈಯಲ್ಲಿದ್ದ ರೂ.45 ಸಾವಿರ ಮೌಲ್ಯದ 4 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಟ್ವಾಳ ನಗರ ಠಾಣಾ ಪೋಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಸಂಶಯದ ಮೇಲೆ ವಿಚಾರಿಸಿದಾಗ ಇವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುವ ವಿಚಾರ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ನಂದಾವರದ ಗೌಸಿಯಾ ಹೋಟೇಲ್ ಬಳಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ನಿಷೇಧಿತ ನಿದ್ರಾಜನಕ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದ ವೇಳೆ ಎಸ್.ಐ.ರಾಮಕೃಷ್ಣ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.