ಮೂಲ್ಕಿ: ಹಳೆಯಂಗಡಿ ಪಕ್ಷಿಕೆರೆ ಜಂಕ್ಷನ್ ಬಳಿ ಕಂಟೈನರ್ ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದು ಸಹಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸವಾರ ಗಾಯಗೊಂಡಿದ್ದಾರೆ.
ಲಾರಿ ಮತ್ತು ಬೈಕ್ಗಳೆರಡೂ ಮುಕ್ಕ ಕಡೆಯಿಂದ ಮೂಲ್ಕಿಯತ್ತ ಬರುತ್ತಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಹಿಂಬದಿ ಸವಾರ ಸುಗಾಂದ್ (21) ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು. ಬೈಕ್ ಚಾಲನೆ ಮಾಡುತ್ತಿದ್ದ ಇನ್ಸಾಫ್ (21) ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಮೂಲ್ಕಿ ಸೈಂಟ್ ಆ್ಯನ್ಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕೇರಳ ಮೂಲದವರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅವೈಜ್ಞಾನಿಕ ಕೂಡುರಸ್ತೆ ತೀರಾ ಅವೈಜ್ಞಾನಿಕವಾಗಿರುವ ನಾಲ್ಕು ರಸ್ತೆಗಳು ಸೇರುವ ಈ ಜಂಕ್ಷನ್ ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ನಿರಂತರ ಅಪಘಾತಗಳಾಗುತ್ತಿವೆ. ಸಮಸ್ಯೆ ನಿವಾರಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಾರ್ವಜನಿಕರು ಆಗ್ರಹಿಸಿದ್ದಾರೆ.