Home Karavali Karnataka ಮಂಗಳೂರು : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ : ಪ್ರೇಮ ವೈಫಲ್ಯದಿಂದ...

ಮಂಗಳೂರು : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ : ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ…!!

ತನಿಖೆಯಲ್ಲಿ ಬಯಲಾಯ್ತು ಅಸಲಿ ಸತ್ಯ...

ಮಂಗಳೂರು : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವೀಸ್ಟ್ ಪಡೆದಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.

ಧರ್ಮಸ್ಥಳದ ಬೊಳಿಯೂರು ಮೂಲದ ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿ ಮಗಳು ಆಕಾಂಕ್ಷ ಎಸ್ ನಾಯರ್ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಯುವತಿ. ಮೇ 17ರಂದು ಪಂಜಾಬ್ ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದಿದೆ.

ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದ್ದು ಎಲ್ ಪಿ ಯುನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮ ವೈಫಲ್ಯ ಎಂದು ತಿಳಿದಿದೆ. ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಎಂದು ತಿಳಿದಿದೆ.

ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳವಾಡಿದ್ದು ಬಳಿಕ ಕಾಲೇಜಿನಲ್ಲೂ‌ ಜಗಳ ಮಾಡಿ‌ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೆ ಪ್ರೇರಣೆ ಹಿನ್ನಲೆ ಮ್ಯಾಥ್ಯೂ ವಿರುದ್ದ ಪಂಜಾಬ್ ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಪರೀಕ್ಷೆ ಬಳಿಕ ಹೆತ್ತವರಿಗೆ ಮೃತದೇಹ ಹಸ್ತಾಂತರವಾಗಲಿದೆ. ಬಳಿಕ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.