Home Crime ಮ್ಯಾನೇಜರ್‌ ಕಿರುಕುಳ : ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ..!!

ಮ್ಯಾನೇಜರ್‌ ಕಿರುಕುಳ : ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ..!!

ಬೆಂಗಳೂರು: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಿಖಿಲ್ ಸೋಮವಂಶಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಅಗರ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ನಿಖಿಲ್‌ ಐಐಎಸ್‌ಸಿ ಪದವೀಧರನಾಗಿದ್ದು ಕೋರಮಂಗಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅಸಹಜ ಸಾವು ಪ್ರಕರಣದ ಅಡಿ ಹೆಚ್ಎಸ್ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ನಿಖಿಲ್ ಸೋಮವಂಶಿ ಆತ್ಮಹತ್ಯೆಗೆ ಮ್ಯಾನೇಜರ್‌ ನೀಡಿದ ಟಾರ್ಚರ್‌ ಕಾರಣ ಎಂದು ಸಹದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ. ನಿಖಿಲ್ ಕಾಲೇಜು ದಿನಗಳಿಂದಲೇ ಅತ್ಯುತ್ತಮ ವಿದ್ಯಾರ್ಥಿಯಾಗಿದ್ದರು. ಆದರೆ ಅಮೆರಿಕ ಮೂಲದ ಮ್ಯಾನೇಜರ್‌ ಹೊಸದಾಗಿ ಸೇರಿದ ಉದ್ಯೋಗಿಗಳಿಗೆ ಬಹಳ ಕಿರುಕುಳ ನೀಡುತ್ತಿದ್ದರು. ಈ ಕಿರುಕುಳದಿಂದ ಬೇಸತ್ತು ಹಲವು ಮಂದಿ ರಾಜೀನಾಮೆ ನೀಡಿದ್ದಾರೆ ಎಂದು ದೂರಿದ್ದಾರೆ.

ಕಂಪನಿ ನಷ್ಟದಲ್ಲಿತ್ತು, ಉದ್ಯೋಗಿಗಳು ರಾಜೀನಾಮೆ ನೀಡಿದ್ದರು. ಹೀಗಾಗಿ ಕೆಲಸದ ಒತ್ತಡ ಜಾಸ್ತಿ ಇತ್ತು. ಈ ಕಾರಣಕ್ಕೆ ಮ್ಯಾನೇಜರ್‌ ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.