ಅಮರಾವತಿ: ಲಾರಿ ಹಾಗೂ ಇನ್ನೋವಾ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.ಅದರಲ್ಲಿ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿರೋ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಮರೋಲು ಮಂಡಲದ ತತಿಚೆರ್ಲಮೋಟು ಬಳಿ ಸಂಭವಿಸಿದೆ.
ಮಹಾನಂದಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ 8 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇನ್ನೋವಾ ಕಾರು ಅತಿವೇಗದಲ್ಲಿ ಬಂದು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ನಜ್ಜುಗುಜ್ಜಾದ ವಾಹನದೊಳಗೆ ಸಿಲುಕಿದ್ದ ಶವಗಳನ್ನ ಹೊರತೆಗೆದಿದ್ದಾರೆ. ಮೃತರನ್ನು ಭವಾನಿ, ನರಸಿಂಹನ್, ಬಬ್ಲು, ದಿವಾಕರ್, ಸನ್ನಿ ಮತ್ತು ಅಮ್ಕಾಲು ಎಂದು ಪೊಲೀಸರು ಗುರುತಿಸಿದ್ದಾರೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.