ಬೈಂದೂರು: ನಗರದ ಸಮೀಪ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವ ಬಗ್ಗೆ ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ಮಜೀದ್ ಎಂಬಾತ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಎಂದು ತಿಳಿದು ಬಂದಿದೆ.
ಆಹಾರ ಇಲಾಖೆಯ ಅಧಿಕಾರಿಗಳು 22 ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಘಟನೆ ವಿವರ : ಪಿರ್ಯಾದಿದಾರರಾದ ವಿನಯಕುಮಾರ್ ಅಹಾರ ನಿರೀಕ್ಷಕರು ಬೈಂದೂರು ತಾಲೂಕುರವರಿಗೆ ಬಿಜೂರು ಗ್ರಾಮದ ಮುರ್ಗೋಳಹಕ್ಲು ಎಂಬಲ್ಲಿ ನಾಗರಾಜ ರವರಿಗೆ ಸಂಬಂಧಿಸಿದ ಕಟ್ಟಡದಲ್ಲಿ ಮಜೀದ್ ಎಂಬಾತನು ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಗ್ರಾಮ ಅಡಳಿತ ಅಧಿಕಾರಿ ಪ್ರಿಯಾಂಕರವರೊಂದಿಗೆ ಪಂಚರ ಸಮಕ್ಷಮದಲ್ಲಿ ದಿನಾಂಕ 25/05/2025 ರಂದು ಬೆಳಿಗ್ಗೆ 11:35 ಗಂಟೆಗೆ ದಾಳಿ ನಡೆಸಿ ಆರೋಪಿಯು ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ನಾಗರಾಜ ರವರ ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ ಒಟ್ಟು 11 ಕ್ವಿಂಟಾಲ್ ತೂಕದ ರೂಪಾಯಿ 37.400/- ಮೌಲ್ಯದ 22 ಅಕ್ಕಿ ತುಂಬಿರುವ ಚೀಲಗಳನ್ನು ಸ್ವಾದೀನಪಡಿಸಿಕೊಂಡಿರುವುದಾಗಿದೆ, ಈ ಬಗ್ಗೆ ಬೈಂದೂರು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 110/2025 ಕಲಂ: 3 .6.7 Essential commodities act ರಂತೆ ಪ್ರಕರಣ ದಾಖಲಾಗಿರುತ್ತದೆ.