Home Crime ಮಂಗಳೂರು: ಶರಣ್‌ ಪಂಪ್‌ವೆಲ್ ಬಂಧನ : ಕದ್ರಿ ಠಾಣೆ ಎದುರು ಜಮಾಯಿಸಿದ ಕಾರ್ಯಕರ್ತರು…!!

ಮಂಗಳೂರು: ಶರಣ್‌ ಪಂಪ್‌ವೆಲ್ ಬಂಧನ : ಕದ್ರಿ ಠಾಣೆ ಎದುರು ಜಮಾಯಿಸಿದ ಕಾರ್ಯಕರ್ತರು…!!

 

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್‌ಗೆ ‌ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ (ಮೇ 27) ಪೊಲೀಸರು ಬಂಧಿಸಿದ್ದಾರೆ.

ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್‌ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದಾರೆ.

ಠಾಣೆಗೆ ಡಿಸಿಪಿ ರವಿಶಂಕರ್ ಭೇಟಿ ನೀಡಿದ್ದು, ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಠಾಣೆ ಆವರಣದಿಂದ ಚದುರಿಸಲಾಗಿದೆ.

ಶರಣ್‌ ಪಂಪ್‌ವೆಲ್‌ ಅವರನ್ನು ಪೊಲೀಸರು ಈಗಾಗಲೇ ವೈದ್ಯಕೀಯ ತಪಾಸಣೆಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಪೊಲೀಸರು ಬಿಡುಗಡೆ ಮಾಡಿದರು.