ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ಗ್ರಾಮದ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ದಿನಾಂಕ 24-02-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ತಾಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಪೂಜಾರಿ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಜೇಶ್ ಪೂಜಾರಿ, ಪವಿತ್ರ ಶೆಟ್ಟಿ, ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಸ್ಥಳ ದಾನಿಗಳಾದ ಶ್ರೀನಿವಾಸ ಶೆಟ್ಟಿ ಹಾಗೂ ಸ್ಥಳೀಯರಾದ ಲಕ್ಷ್ಮಿಶ್ ಆಚಾರ್ಯ ಉಪಸ್ಥಿತರಿದ್ದರು.



