ಉಡುಪಿ: ನಗರದ ಸಮೀಪ ಬಾಡಿಗೆ ಮನೆಯೊಂದರಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಮಗು ಕಾಳಮ್ಮ ಎಂದು ತಿಳಿಯಲಾಗಿದೆ.
ಘಟನೆ ವಿವರ: ಪಿರ್ಯಾದಿದಾರರಾದ ಅಯ್ಯಪ್ಪ (27), ಪುತ್ತೂರು ಗ್ರಾಮ, ಉಡುಪಿ ಇವರು ಉಡುಪಿಯಲ್ಲಿ ಕಳೆದ 3 ವರ್ಷಗಳಿಂದ ಕೆಲಸವನ್ನು ಮಾಡಿಕೊಂಡಿದ್ದು, ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಗಂಗಾಧರ ರವರ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದು, ಪಿರ್ಯಾದಿದಾರರು ದಿನಾಂಕ 04/06/2025 ರಂದು 8 ಗಂಟೆಗೆ ಕೆಲಸಕ್ಕೆ ಹೋಗಿದ್ದು, ಹೆಂಡತಿ, ಮಗು ಕಾಳಮ್ಮ(1) ರವರನ್ನು ಜೋಲಿಯಲ್ಲಿ ಹಾಕಿ ಮಲಗಿಸಿ ಕೆಲಸಕ್ಕೆಂದು ಬೆಳಿಗ್ಗೆ 9:30 ಗಂಟೆಗೆ ಮನೆಯಿಂದ ಹೋಗಿದ್ದು, ವಾಪಸ್ಸು ಮನೆಗೆ 11:30 ಗಂಟೆಗೆ ಬಂದಾಗ ಮಗುವಿನ ಕುತ್ತಿಗೆಗೆ ಜೋಲಿಗೆ ಕಟ್ಟಿದ್ದ ಸೀರೆಯು ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡು ಬಂದಿದ್ದು, ನಂತರ ಮಗುವನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಮೃತಪಟ್ಟಿರುವುದಾಗಿ ತಿಳಿಸಿದ್ದು, ಮಗು ಜೋಲಿಯಿಂದ ಇಳಿಯಲು ಹೋಗಿ ಅಥವಾ ನಿದ್ರಾ ಸ್ಥಿತಿಯಲ್ಲಿ ಜೋಲಿಗೆ ಯಿಂದ ಬಿದ್ದು ಜೋಲಿಗೆ ಕಟ್ಟಿದ ಸೀರೆಯು ಕುತ್ತಿಗೆಗೆ ತಾಗಿ ಉಸಿರುಕಟ್ಟಿ ಮೃತಪಟ್ಟಿರಬಹುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯುಡಿಅರ್ ಕ್ರಮಾಂಕ 53/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
