ಬಂಟ್ವಾಳ : ವಿಷದ ಹಾವೊಂದು ಕಡಿದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ
ಮೃತ ಯುವಕನನ್ನು ಬಂಟ್ವಾಳದ ತೆಂಕಕಜೆಕಾರು ಗ್ರಾಮದ ಪಾದೆಮನೆಯ ದಿ.ಇಸ್ಮಾಯಿಲ್ ಅವರ ಪುತ್ರ ಆಶ್ರಫ್ (28) ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರಾಗಿದ್ದ ಅಶ್ರಫ್ ಪಾಂಡವರಕಲ್ಲು ಎಂಬಲ್ಲಿ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಲಿನ ಬೆರಳಿಗೆ ಹಾವು ಕಚ್ಚಿದೆ. ಸಮೀಪದ ನಾಟಿ ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಪಾಂಡವರಕಲ್ಲು ಎಸ್ಕೆಎಸ್ಎಸ್ಎಫ್ ಸಂಘಟನೆ ಸದಸ್ಯರಾಗಿದ್ದ ಅವರಿಗೆ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದು ಪತ್ನಿ ಗರ್ಭಿಣಿಯನ್ನು ಅಗಲಿದ್ದಾರೆ.