Home Karavali Karnataka ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಟಿ.ಜಿ. ಶಿವಶಂಕರೇಗೌಡ ಇವರನ್ನು ಉಡುಪಿ ವಕೀಲರ ಸಂಘದ ನಿಯೋಗ ಭೇಟಿ…!!

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಟಿ.ಜಿ. ಶಿವಶಂಕರೇಗೌಡ ಇವರನ್ನು ಉಡುಪಿ ವಕೀಲರ ಸಂಘದ ನಿಯೋಗ ಭೇಟಿ…!!

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಟಿ.ಜಿ. ಶಿವಶಂಕರೇಗೌಡ ಇವರನ್ನು ಉಡುಪಿ ವಕೀಲರ ಸಂಘದ ನಿಯೋಗವು ಇಂದು ಜೂನ್ ತಾ. 5ರಂದು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿಯಾಗಿ ಅವರಿಗೆ ಫುಷ್ಪಗುಚ್ಚ ನೀಡಿ ಅಭಿನಂದಿಸಿತು.

ಹಾಗೂ ಉಡುಪಿ ವಕೀಲರ ಸಂಘವು ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಆಯೋಜಿಸಿರುವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಅವರನ್ನು ಆಹ್ವಾನಿಸಿತು.

ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಜಂಟಿ ಕಾರ್ಯದರ್ಶಿ ಶ್ರೀ ಬೈಲೂರು ರವೀಂದ್ರ ದೇವಾಡಿಗ, ಕಾರ್ಯಕಾರಿ ಸಮಿತಿ ಸದಸ್ಯ ಶ್ರೀ ಪ್ರಜ್ವಲ್ ಶೆಟ್ಟಿ, ವಕೀಲರಾದ ಶ್ರೀ ಮೊಹಮ್ಮದ್ ರಫೀಕ್ ಖಾನ್ ಮತ್ತು ಶರತ್ ಕುಂದರ್ ಉಪಸ್ಥಿತರಿದ್ದರು.