ಮೂಡುಬೆಳ್ಳೆ: ಜ್ಞಾನಗಂಗಾ ಪಿಯು ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆ ಇದರ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಿನ್ನೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಯಾದವ ದೇವಾಡಿಗ ಮಾತನಾಡಿ, ದೃಢಸಂಕಲ್ಪ ಶಿಸ್ತಿನ ಮೌಲ್ಯಾಧಾರಿತ ಜೀವನ ನಿಮ್ಮದಾಗಲಿ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಡಾ. ಗಣೇಶ್ ಅಮೀನ್ ಸಂಕಮಾರ್ ಇವರು ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕವಾಗಿ ದೈಹಿಕವಾಗಿ ಅಭಿವೃದ್ಧಿ ಹೊಂದಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿ ಹೊಂದುವಂತಹ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕು. ಯುವಜನತೆ ಸದಾ ದೇಶಕ್ಕಾಗಿ ಬದುಕಬೇಕು. ಯುವಕರ ಮನಸ್ಸು ದೃಢಗೊಳ್ಳಬೇಕು, ಎಲ್ಲಾ ವಿದ್ಯಾರ್ಥಿಗಳು ಮೊದಲು ಒಳ್ಳೆಯ ಮನಸಿರುವ ಸಂಸ್ಕಾರಯುತ ಮಾನವರಾಗಬೇಕು ಎಂದು ಹೇಳಿ ಪೋಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.
ಕಾರ್ಯಕ್ರಮದ ಅತಿಥಿಗಳಾದ ಶ್ರೀ ಎಮ್ ಗೋಪಿಕೃಷ್ಣ ರಾವ್ ಸ್ಥಾಪಕ ಅಧ್ಯಕ್ಷರು ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜು ಹಾಗೂ ವಕೀಲರು , ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವ ರೀತಿಯ ಕಲಿಕೆ ಮುಖ್ಯ ಎನ್ನುವುದರ ಅರಿವು ಮೂಡಿಸಿದರು. ಮುಕುಂದ ಕಾಮತ್ ಅವರ ಬದಲಿಗೆ ಶ್ರೀಲೀಲಾದರ ಕಾಮತ್ ಇವರು ಹಾಗೂ ಶ್ರೀ ಪ್ರಭಾಕರ್ ಕೆ. ಎಸ್ ಕಾರ್ಯದರ್ಶಿ, ಜನರಲ್ ಇನ್ಸೂರೆನ್ಸ್ ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ಉಡುಪಿ ಇವರೆಲ್ಲರೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀನಾ ಎಸ್ ನಾಯ್ಕ ಇವರು ಪ್ರಸ್ತಾವಿಕ ಮಾತುಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರೆಲ್ಲರೂ ಸೇರಿ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದ 14ನೇ ಸ್ಥಾನವನ್ನು ಪಡೆದಂತಹ ಕೀರ್ತನ ಹಾಗೂ ಮಂಜುನಾಥ್ ಇವರನ್ನು ಕೂಡ ಸನ್ಮಾನಿಸಲಾಯಿತು.
ಪ್ರಥಮ ಪಿಯುಸಿಗೆ ದಾಖಲಾತಿಗೊಂಡ ಎಸ್ ಎಲ್ ಸಿ ಯಲ್ಲಿ 95 ಶೇಕಡಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕೂಡ ಗೌರವಿಸಲಾಯಿತು.
ನಮ್ಮ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ತಾಯಿ ಸುನೀತಾ ಪೂಜಾರಿ ಅಂಗನವಾಡಿ ಕಾರ್ಯಕರ್ತೆ, ಮೊನ್ನೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಕಲಾವಿಭಾಗದಲ್ಲಿ 401 ಅಂಕದೊಂದಿಗೆ 67% ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧನೆಯನ್ನು ಗುರುತಿಸಿ ಅತಿಥಿಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು. ಭಾಸ್ಕರಾ ಆಚಾರ್ಯ ಸ್ವಾಗತಿಸಿದರು. ಶ್ರೀಮತಿ ರಮ್ಯಾ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು. ಶ್ರೀಮತಿ ವನ್ಯಶ್ರೀ ಇವರು ಸರ್ವರಿಗೂ ಧನ್ಯವಾದಗಳು ಸಲ್ಲಿಸಿದರು. ವಿದ್ಯಾರ್ಥಿ ಅಮೋಘ್ ಪ್ರಾರ್ಥಿಸಿದರು. ಶ್ರೀಮತಿ ದಿವ್ಯ ನಿರೂಪಿಸಿದರು.