ಬೆಂಗಳೂರು : ಐಪಿಎಲ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಆರ್ಸಿಬಿಗೆ ಬೆಂಗಳೂರಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆಯೋಜಿಸಿದ ಸನ್ಮಾನ ಕಾರ್ಯಕ್ರಮ ಹಾಗೂ ವಿಜಯೋತ್ಸವ ಸಂಭ್ರಮ ದುರಂತದಲ್ಲಿ ಅಂತ್ಯಗೊಂಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಇದೀಗ ಸರ್ಕಾರ ಪೊಲೀಸ್ ಕಮಿಷನರ್ ತಲೆದಂಡ ಮಾಡಿ ಆದೇಶ ಹೊರಡಿಸಿದೆ. ಇತ್ತ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಇದೀಗ ಆರ್ಸಿಬಿ ಮ್ಯಾನೇಜ್ಮೆಂಟ್ನ ನಾಲ್ವರನ್ನು ಬಂಧಿಸಲಾಗಿದೆ. ಇತ್ತ ಕೆಎಸ್ಸಿ ಪದಾಧಿಕಾರಿಗಳು ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
