ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಶಂಕರ ಈತ ಬ್ಯಾಂಕಿನ ₹88150 ರೂಪಾಯಿಗಳನ್ನು ಸುಂದರ ಕುಲಾಲ ಎಂಬುವರಿಗೆ ಕೂಲಿ ಬಾಬ್ತು ನೀಡಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ.
ಸದ್ರಿ ಮೊತ್ತವನ್ನು ದುರ್ಬಳಕೆ ಮಾಡಿ ತಾನು ಕೆಲಸ ಮಾಡುವ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಮೋಸ ಮತ್ತು ನಂಬಿಕೆ ದ್ರೋಹ ಮಾಡಿರುತ್ತಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೀನಾ ನಾಯ್ಕ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ.
ಹೆಬ್ರಿ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.