ಬೈಂದೂರು: ಇವಾಗಲೇ ಕರ್ನಾಟಕ ರಾಜ್ಯದ್ಯಂತ ಮಳೆರಾಯ ಅಬ್ಬರಿಸಿ ಹೋಗಿರುವ ಘಟನೆ ಎಲ್ಲರಿಗೂ ತಿಳಿದಿದೆ ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ವೀಕೆಂಡ್ ಇರುವುದರಿಂದ ತ್ರಾಸಿ -ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದ ನೀರಿಗೆ ಇಳಿಯದಂತೆ ಸೂಚನಾ ಫಲಕವನ್ನು ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಅಳವಡಿಸಿದ್ದಾರೆ.
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಆಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕರ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ತ್ರಾಸಿ -ಮರವಂತೆ ಬೀಚಿಗೆ ಹೆಚ್ಚಿನ ಭದ್ರತೆಗಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ಬೈಂದೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 66ರ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣವಾದ ತ್ರಾಸಿ, ಮರವಂತೆ ಬೀಚ್ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಗಂಗೊಳ್ಳಿ ಪೊಲೀಸರು ಪೋಸ್ಟಲ್ ಗಾರ್ಡ್ ಕೆಂಪು ಪಟ್ಟಿ ಹಾಗೂ ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಿದ್ದಾರೆ ಹಾಗೂ ಕಳೆದ ವರ್ಷ ತ್ರಾಸಿ ಬೀಚಿನ ಬಂಡೆ ಮೇಲೆ ನಿಂತ ವ್ಯಕ್ತಿಯು ಸಮುದ್ರದ ಅಬ್ಬರದ ಅಲೆಗೆ ಕೊಚ್ಚಿ ಹೋದ ಘಟನೆ ನಡೆದಿದೆ ಪ್ರವಾಸಿಗರು ಮೋಜು ಮಸ್ತಿ ಮಾಡುವ ವೇಳೆ ಹುಚ್ಚಾಟ ಮಾಡಬಾರದೆಂದು ಹೇಳಿದರು.
ಪ್ರವಾಸಿಗರು ಸಮುದ್ರದ ಅಲೆಗಳ ಜೊತೆ ಮೋಜು ಮಸ್ತಿ ಮಾಡಿ ಹುಚ್ಚಾಟ ಮಾಡುವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.







Good