Home Karavali Karnataka ಮಂಗಳೂರು : ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ…!!

ಮಂಗಳೂರು : ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ…!!

ಮಂಗಳೂರು : ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ ) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷ ಗಳಿಂದ ವೇಷ ಧಾರಿಯಾಗಿ, 3 ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.

ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು.

ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟ ದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ ಕಲಾವಿದರಾಗಿದ್ದರು.