ಹಾಸನ : ವೈವಾಹಿಕ ಜೀವನದ ವೈಫಲ್ಯದಿಂದ ಖನ್ನತೆಗೆ ಜಾರಿದ್ದ ತಾಯಿಯೊಬ್ಬಳು ತನ್ನ 6 ವರ್ಷದ ಮಗಳನ್ನು ತೊರೆ ನೀರಿನಲ್ಲಿ ಮುಳುಗಿಸಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಹಿರೀಸಾವೆ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗದ ರಘು-ಶ್ವೇತಾ ದಂಪತಿ ಪುತ್ರಿ ಸಾನ್ವಿ (6) ಮೃತ ದುರ್ದೈವಿ ಎಂದು ತಿಳಿಯಲಾಗಿದೆ.
ಮಗಳನ್ನು ಕೊಂದ ಬಳಿಕ ತಾನೂ ಸಾಯುವುದಾಗಿ ಕಿರುಚಾಡುತ್ತಿದ್ದ ಆಕೆಯನ್ನು ರಕ್ಷಿಸಿರುವ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ್ದಾರೆ. ಮಗುವನ್ನು ನೀರಿನಲ್ಲಿ ಮುಳುಗಿಸುತ್ತಿರುವುದನ್ನು ಕಂಡ ಸ್ಥಳೀಯರು, ಮಗುವನ್ನು ನೀರಿನಿಂದ ಹೊರತಂದು ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.