ಉಡುಪಿ : ರಾಷ್ಟ್ರೀಯ ಹೆದ್ದಾರಿ ಇಲಾಖೆ ಶೃಂಗೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ನಾಯಕ್ (52 ವರ್ಷ) ಮಾರ್ಚ್ 6ರಂದು ಬೆಳಗಿನ ಜಾವ ಹೃದಯಘಾತದಿಂದ ನಿಧನರಾದರು.
ಮೃತರು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ವರ್ಗವನ್ನು ಆಗಲಿದ್ದಾರೆ.
ತೀರ್ಥಹಳ್ಳಿ, ಶೃಂಗೇರಿ, ಉಡುಪಿ, ಮಣಿಪಾಲ, ಕಾರ್ಕಳ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಲವು ಪ್ರಮುಖ ಕಾಮಗಾರಿಗಳ ಅನುಷ್ಠಾನದಲ್ಲಿ ಮಂಜುನಾಥ್ ನಾಯಕ್ ಅವರ ಪಾತ್ರ ಪ್ರಮುಖವಾಗಿತ್ತು.
ತಮ್ಮ ಸ್ನೇಹಶೀಲ ವ್ಯಕ್ತಿತ್ವ ಸಜ್ಜನಿಕೆಯಿಂದ ಎಲ್ಲರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದ ಮಂಜುನಾಥ ನಾಯಕ್ ನಿಧನಕ್ಕೆ ಆತ್ಮೀಯರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.



