Home Crime ನೆಲ್ಯಾಡಿ: ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ : ಓರ್ವ ಸಾವು…!!

ನೆಲ್ಯಾಡಿ: ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ : ಓರ್ವ ಸಾವು…!!

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ತಡ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.