ಹೆಬ್ರಿ : ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿ ಕುಚ್ಚೂರು ಕಂಚರ್ಕಳ ಎಂಬಲ್ಲಿ ಕಿರು ಸೇತುವೆ ಹಲವು ವರ್ಷಗಳಿಂದ ಸಿಥಿಲ ಗೊಂಡಿದ್ದು ಹಾಗೂ ಮಳೆಗಾಲದಲ್ಲಿ ಇಲ್ಲಿ ಸಂಪರ್ಕ ಕಡಿತಗೊಳ್ಳುವುದು. ಇದರಿಂದ ಈ ಬಗ್ಗೆ ಸಾರ್ವಜನಿಕರು ಕಳೆದ ಹಲವು ವರ್ಷಗಳಿಂದ ಸರಕಾರಕ್ಕೆ ನೂತನ ಸೇತುವೆ ನಿರ್ಮಾಣಕ್ಕೆ ಬೇಡಿಕೆಯನ್ನು ಇಟ್ಟಿದ್ದು. ಈ ಬಾರಿ ಸರಕಾರ ನೂತನ ಸೇತುವೆಗೆ ಸುಮಾರು ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು. ಆದರೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ ವಹಿಸಿದ್ದರ ಪರಿಣಾಮ ಮಳೆಗಾಲದಲ್ಲಿ ಕಾಮಗಾರಿ ಕೈಗೊತ್ತುಕೊಂಡಿದ್ದರಿಂದ ಈಗ ಹೆಬ್ರಿಯಿಂದ ಸುಮಾರು 10 ಗ್ರಾಮಗಳ ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.
ಕಳೆದ 9 ತಿಂಗಳ ಹಿಂದೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ತಂದಿದ್ದೇನೆ. ಮಳೆಗಾಲ ಪ್ರಾರಂಭದ ಮೊದಲೇ ಕಾಮಗಾರಿ ನಡೆಸಿ ಅಂತ. ಆದರೆ ಅಧಿಕಾರಿಗಳ ನಿರ್ಲಕ್ಷಿತನದಿಂದ ಇಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ಹೆಬ್ರಿಯ ಸಂಪರ್ಕವಿಲ್ಲದೆ ಬಹಳ ಬಹಳ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಾಳೆ ಬೆಳಿಗ್ಗೆ 10:30 ಕ್ಕೆ ಹೆಬ್ರಿ ಮುಖ್ಯಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಹೇಳಿದ್ದಾರೆ. ಹೆಬ್ರಿಗೆ ಆ ಗ್ರಾಮದ ಗ್ರಾಮಸ್ಥರು ಬರಬೇಕಾದರೆ ಸುಮಾರು 10 12 ಕಿಲೋಮೀಟರ್ ಸುತ್ತಿ ಬಳಸಿ ಹೆಬ್ರಿಗೆ ಬರಬೇಕಾದ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಹೊಣೆ ಯಾರು ಎಂದು ಮಾಂಡಿ ಮೂರ್ ಕೈ ಆಟೋರಿಕ್ಷಾ ಚಾಲಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ.



