Home Karavali Karnataka ಘಟಪ್ರಭಾ ಉದ್ಯಮಿ ಎಚ್. ಜಯಶೀಲ ಶೆಟ್ಟಿ ಅವರ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಎರಡು ವಾಹನವನ್ನು...

ಘಟಪ್ರಭಾ ಉದ್ಯಮಿ ಎಚ್. ಜಯಶೀಲ ಶೆಟ್ಟಿ ಅವರ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಎರಡು ವಾಹನವನ್ನು ಕೊಡುಗೆ…!!

ಬೈಂದೂರು : ಹೇರಂಜಾಲು ಹಲಸಿನಕಟ್ಟೆಮನೆ ದಿ. ಗುಲಾಬಿ ನಾರಾಯಣ ಶೆಟ್ಟಿ ಸ್ಮರಣಾರ್ಥ ಪುತ್ರ ಎಚ್. ಜಯಶೀಲ ಶೆಟ್ಟಿ ಇವರು ಸುಳ್ಯ ಮತ್ತು ಅರೆಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ ವಾಹನವನ್ನು ಘಟಪ್ರಭಾ ಉದ್ಯಮಿ ಎಚ್. ಜಯಶೀಲ ಶೆಟ್ಟಿ ಅವರ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಎರಡು ವಾಹನವನ್ನು ಕೊಡುಗೆಯಾಗಿ ನೀಡಿದರು.

ಹೇರಂಜಾಲು ಗುಡೇ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮತ್ತು ಎರಡು ವಾಹನಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಗುಡೇ ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ ಅವರು ಮಾತನಾಡಿ
ಪ್ರಸ್ತುತ ಪೋಷಕರ ಅಭಿರುಚಿಗಿಂತ ವಿದ್ಯಾರ್ಥಿಗಳ ಅಭಿರುಚಿಗೆ ಪ್ರೋತ್ಸಾಹ ದೊರೆಯಬೇಕು ಎಂಬ ನೆಲೆಯಲ್ಲಿ ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಮೂಲ ಸೌಕರ್ಯದ ಕೊರತೆಯನ್ನು ಸ್ವಲ್ಪಮಟ್ಟಿಗೆ ನೀಗಿಸುವಲ್ಲಿ ಹಾಗೂ ಸಮಾಜದ ಕಟ್ಟಕಡೆಯ ಮಗುವೂ ಕೂಡ ಶಿಕ್ಷಣವನ್ನು ಪಡೆಯಬೇಕೆಂಬ ಉದ್ದೇಶದಿಂದ ನಮ್ಮ ಸಂಘದ ಅಧ್ಯಕ್ಷರು ಕೈಲಾದ ಸಹಕಾರವನ್ನು ನೀಡುತ್ತಿದ್ದಾರೆಂದು ಹೇಳಿದರು.

ಗುಡೇ ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ
ನಿರ್ದೇಶಕರಾದ ಸುಜಯ್ ಶೆಟ್ಟಿ ಅವರು ಮಾತನಾಡಿ ಗ್ರಾಮೀಣ ಭಾಗದ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಸೌಲಭ್ಯ ಕೊಟ್ಟಾಗ ಅಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಶೈಕ್ಷಣಿಕ ವಾತಾವರಣ ನಿರ್ಮಾಣವಾಗುತ್ತದೆ. ಅನುಭವಿ ಶಿಕ್ಷಕರ ತಂಡ, ಆಡಳಿತ ಮಂಡಳಿ ಸಹಕಾರ ಜತೆಗೆ ಸಾಮಾಜಿಕ ಚಿಂತನೆ ಹಾಗೂ ಕಳಕಳಿ ಇದ್ದಾಗ ಮಕ್ಕಳಿಗೆ ಸಾಧನೆ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅರೆಶಿರೂರು ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮೀ ಕೆ., ಎಸ್‌ಡಿಎಂಸಿ ಅಧ್ಯಕ್ಷ ಅಣ್ಣಪ್ಪ ಮೂರೂರು, ಮಾಜಿ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ, ವಿಠಲ ಗೌಡ, ಸುಳ್ಯ ಶಾಲಾ ಮುಖ್ಯಶಿಕ್ಷಕಿ ಶಾರದಾ ದೇವಾಡಿಗ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ ಆಚಾರ್ಯ, ಗ್ರಾಪಂ ಮಾಜಿ ಸದಸ್ಯ ಶೇಖರ ಬಳೆಗಾರ್, ಶೈಲೇಶ್ ಶೆಟ್ಟಿ
ಹಳೆವಿದ್ಯಾರ್ಥಿ ಸಂಘದ ಜೋಗ ಪೂಜಾರಿ ಉಪಸ್ಥಿತರಿದ್ದರು.