ಬೈಂದೂರು : ಕಳೆದ 3-4 ದಿನಗಳಿಂದ ಬೈಂದೂರುನಲ್ಲಿ ಎಡೆ ಬಿಡದೇ ಮಳೆಯಾಗುತ್ತಿದ್ದು, ಕೊಲ್ಲೂರು ಘಾಟಿ ಪ್ರದೇಶದಲ್ಲೂ ನಿರಂತರ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ,ಭಾಗದಲ್ಲಿ ನೆರೆ ನೀರು ಮನೆಗಳಿಗೆ ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನೊಂದೆಡೆಯಲ್ಲಿ ಕಡಲ ಕೊರೆತ ಕೂಡ ಮುನ್ಸೂಚನೆ ಸಿಕ್ಕಿದೆ
ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಹಿನ್ನೆಲೆಯಲ್ಲಿ ಮತ್ತು ತ್ರಾಸಿ -ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಮುದ್ರದ ನೀರಿಗೆ ಇಳಿಯದಂತೆ ಸೂಚನಾ ಫಲಕವನ್ನು ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಅಳವಡಿಸಿದ್ದಾರೆ
ನೆರೆಯ ಆರ್ಭಟದಿಂದ
ನಾವುಂದ ಮತ್ತು ನಾಡ ಕುದ್ರುವಿನಲ್ಲಿಯೂ ನೆರೆ ಆವರಿಸಿದ್ದು, ಇಲ್ಲಿನ ಹಲವಾರು ಮನೆಯವರು ಆತಂಕದಲ್ಲೇ ದಿನಕಳೆಯುವಂತಾಗಿದೆ.
ಕುದ್ರುವಿನ ಸುತ್ತಲೂ ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದೆ. ವರ್ಷವಿಡೀ ದೋಣಿಯನ್ನೇ ಆಶ್ರಯಿ ಸಿರುವ ಇಲ್ಲಿನ ನಿವಾಸಿಗಳು ಈಗ ನೆರೆಯಿಂದಾಗಿ ದೋಣಿಯಲ್ಲೂ ಸಂಚರಿಸಲು ಅಸಾಧ್ಯವಾಗಿದೆ.
ಪ್ರತಿವರ್ಷ ನೆರೆ ಬಂದಾಗ ಮಣ್ಣು ಕೊಚ್ಚಿ ಹೋಗುತ್ತಿದ್ದು, ನದಿ ದಡದಲ್ಲಿ ತಡೆಗೋಡೆಯೂ ಇಲ್ಲದೆ ಇರುವುದರಿಂದ ವರ್ಷದಿಂದ ವರ್ಷಕ್ಕೆ ನದಿ ಕೊರೆತವೂ ಜಾಸ್ತಿಯಾಗುತ್ತಿದೆ
ನೆರೆ ಪಿಡಿತ ಮತ್ತು ಕಡಲ ಕೊರೆತ ಪ್ರದೇಶವನ್ನು
ಡ್ರೋನ್ ಮೂಲಕ ವೀಕ್ಷಿಸಲಾಯಿತು ನೆರೆ ಇದೀಗ ಸ್ವಲ್ಪ ಇಳಿಮುಖ ಕಂಡಿದೆ… ಘಾಟಿ ದೇಶದಲ್ಲಿ ಮಳೆಯಾದಲ್ಲಿ ಮತ್ತೆ ನೆರೆ ಬರುವ ಸಾಧ್ಯತೆ ಹೆಚ್ಚಿದೆ..

