Home Crime ಪತ್ನಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತಿ‌…!!

ಪತ್ನಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತಿ‌…!!

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದ ಘಟನೆ ಜೂ.19 ರಾತ್ರಿ 11.30ಕ್ಕೆ ನಡೆದಿದೆ ‌

ಕೊಲೆ‌ಯಾದ ಮಹಿಳೆ ರೇಖಾ‌(27) ಎಂದು ತಿಳಿದು ಬಂದಿದೆ. ‌

ಕೊ‌ಲೆ ಮಾಡಿದ ಆರೋಪಿ ಕೊಳಂಬೆ ಗ್ರಾಮದ ನಿವಾಸಿಯಾದ ಆರೋಪಿ ಗಣೇಶ ಪೂಜಾರಿ(42) ಎಂದು ಗುರುತಿಸಲಾಗಿದೆ.

ಆರೋಪಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ, ಈಗ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು. ರೇಖಾ ಪೆಡ್ರೋಲ್ ಬಂಕ್‌ವೊಂದರಲ್ಲಿ ಕೆಲಸಕ್ಕಿದ್ದು ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಈ ಬಗ್ಗೆ ಈ ಹಿಂದೆ ಶಂಕರನಾರಾಯಣ ಪೊಲೀಸರಿಗೆ ದೂರು ಅರ್ಜಿ ನೀಡಲಾಗಿದ್ದು ಅವರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಆದರೆ ಗಣೇಶ್ ತನ್ನ ಚಾಳಿ ಮುಂದುವರೆಸಿದ್ದು ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ್ದ. ಪತ್ನಿಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಕುಂದಾಪುರ ವೃತ್ತನಿರೀಕ್ಷಕ ಜಯರಾಮ್ ಗೌಡ, ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ನಾಸೀರ್ ಹುಸೇನ್ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.