Home Karavali Karnataka ಕಾರ್ಕಳ: ಜೂ. 23ರಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಧರಣಿ ಸತ್ಯಾಗ್ರಹ..!!

ಕಾರ್ಕಳ: ಜೂ. 23ರಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಧರಣಿ ಸತ್ಯಾಗ್ರಹ..!!

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ರವರ ಸುಳ್ಳು ಆರೋಪ ಹಾಗೂ ಶಾಸಕರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ‌ ನೀಡಿದ ಬಿಜೆಪಿ ಯುವ ಮೋರ್ಚ ಮುಖಂಡನ ಬಂಧನಕ್ಕೆ ಆಗ್ರಹಿಸಿ ಜೂ. 23ರಂದು ಬೆಳಗ್ಗೆ 10ಕ್ಕೆ ಕಾರ್ಕಳ ಬಸ್ ನಿಲ್ದಾಣ ಸಮೀಪ ಧರಣಿ ಸತ್ಯಾಗ್ರಹ ನಡೆಯಲಿದೆ.

ಕಾರ್ಕಳ ಶಾಸಕರು ರಾಜ್ಯ ಸರಕಾರದ ಮೇಲೆ ಕೆಲವು ಸುಳ್ಳು ಆರೋಪಗಳನ್ನು ಹೊರಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ, ಆದರೆ ಅವರು ಹೊರಿಸಿರುವ ಆರೋಪಗಳಿಗೆ ಅವರ ಬಿಜೆಪಿ ಸರಕಾರ ಹೊರಡಿಸಿದ ಆದೇಶಗಳೇ ಕಾರಣವಾಗಿದೆ. ಆದರೆ ತಮ್ಮ ತಪ್ಪನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಎಲ್ಲಾ ಆರೋಪಗಳಿಗೆ ಪ್ರತಿಭಟನೆಯಲ್ಲೇ ದಾಖಲೆ ಸಹಿತ ಉತ್ತರ ಕೊಡಲಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.