Home Karavali Karnataka ಉಡುಪಿ ವಕೀಲರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ಅವರಿಗೆ ಅಭಿನಂದನೆ…!!

ಉಡುಪಿ ವಕೀಲರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ಅವರಿಗೆ ಅಭಿನಂದನೆ…!!

ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀಮತಿ ಸ್ವರೂಪ ಟಿ.ಕೆ. ಇವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಇಂದು ಜೂನ್ ತಾ. 23ರಂದು ಪುಷ್ಪಗುಚ್ಛ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಎ.ಆರ್., ಜತೆ ಕಾರ್ಯದರ್ಶಿ ಶ್ರೀ ಬೈಲೂರು ರವೀಂದ್ರ ದೇವಾಡಿಗ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಸಂತೋಷ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಜಯಕೃಷ್ಣ ಆಳ್ವ, ಶ್ರೀಧರ್ ಎಸ್. ಭಟ್ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.