Home Karavali Karnataka ಯುವ ವಿಚಾರ ವೇದಿಕೆ : ರಜತ ಸಂಭ್ರಮ ಆರೋಗ್ಯ ಮಾಹಿತಿ ಕಾರ್ಯಕ್ರಮ…!!

ಯುವ ವಿಚಾರ ವೇದಿಕೆ : ರಜತ ಸಂಭ್ರಮ ಆರೋಗ್ಯ ಮಾಹಿತಿ ಕಾರ್ಯಕ್ರಮ…!!

ಯುವ ವಿಚಾರ ವೇದಿಕೆ ಕೊಳಲಗಿರಿ ಇದರ ರಜತಸಂಭ್ರಮದ 18ನೇ ಕಾರ್ಯಕ್ರಮ ಆರೋಗ್ಯ ಮಾಹಿತಿ ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು.

ಉಡುಪಿ ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಹೆಚ್ ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಾಪಾಡುವಲ್ಲಿ ಏನು ಮಾಡಬೇಕು ಹಾಗೂ ಮಲೇರಿಯಾ, ಡೆಂಗ್ಯೂ ಕಾಯಿಲೆ ರೋಗಲಕ್ಷಣ ಮತು ರೋಗ ಹರಡದಂತೆ ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಅನ್ನುವುದನ್ನು ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಮಾಹಿತಿ ಪಡೆದುಕೊಂಡ ಉಪ್ಪೂರು ಪ್ರೌಢ ಶಾಲಾ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ನಡೆದ ಶಿಬಿರದ ಸಭಾ ವೇದಿಕೆಯಲ್ಲಿ ಯುವ ವಿಚಾರ ವೇದಿಕೆ ಜೊತೆ ಕಾರ್ಯದರ್ಶಿ ಶಕುಂತಲಾ ಸುಕೇಶ್, ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಕುಮಾರ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೊಳಲಗಿರಿ ಇಲ್ಲಿನ ಅಧಿಕಾರಿಗಳು , ಆಶಾ ಕಾರ್ಯಕರ್ತೆಯರು, ಶಾಲಾ ಅಧ್ಯಾಪಕ ವೃಂದ, ನಿಕಟ ಪೂರ್ವ ಅಧ್ಯಕ್ಷರು ದಿನೇಶ್ ಶೆಟ್ಟಿ, ವೇದಿಕೆ ಸದಸ್ಯರು ಉಪಸ್ಥಿತರಿದ್ದರು.. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.