ಮಂಗಳೂರು: ಗಾಂಜಾ ಸೇವಿಸಿ ಅಮಲಿನಲ್ಲಿದ್ದ ದೇರೆಬೈಲು ಲ್ಯಾಂಡ್ ಲಿಂಕ್ಸ್ ಟೌನ್ಶಿಪ್ ನಿವಾಸಿ ಉದಿತ್ (26) ಎಂಬಾತನನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೇಡಿಹಿಲ್ ಬಳಿ ಅಮಲಿನಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಆತನನ್ನು ಪೊಲೀಸರು ತಡೆದು ವಿಚಾರಣೆ ನಡೆಸಿದ್ದು, ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಈ ಬಗ್ಗೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.