ಉಡುಪಿ: ನನ್ನ ರೆಸಾರ್ಟ್ಗೆ ಸಂಬಂಧಿಸಿದ ಸಿಂಗಲ್ ಲೇಔಟ್ ನೀಡುವ ವಿಚಾರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದವರು ಕಳೆದ ಎರಡು ವರ್ಷಗಳಿಂದ ಸತಾಯಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಈ ಕುರಿತು ತಮ್ಮ ನಿವಾಸದಲ್ಕಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಸಿಂಗಲ್ ಲೇಔಟ್ ಮಂಜೂರು ಮಾಡಬೇಕು. ಇಲ್ಲವಾದರೆ ನೀಡಲು ಸಾಧ್ಯವಿಲ್ಲ ಎಂಬುದಾಗಿ ಹಿಂಬರಹ ನೀಡಬೇಕು. ಈ ಬೇಡಿಕೆ ಈಡೇರುವ ತನಕ ಸೋಮವಾರದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಧರಣಿ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.
ನಾನು ಮೊದಲಿನಿಂದಲೂ ಉದ್ಯಮಿ.ರಾಜಕೀಯ ನನ್ನ ಪ್ರವೃತ್ತಿಯಾಗಿತ್ತು.ಉದ್ಯಮ ನನ್ನ ವೃತ್ತಿ.ಕಳೆದ 2 ವರ್ಷಗಳಿಂದ ಉಡುಪಿ ಶಾಸಕರು ರಾಜಕೀಯ ದ್ವೇಷದಿಂದ ಸಿಂಗಲ್ ಲೇಔಟ್ ನೀಡಲು ಸತಾಯಿಸುತ್ತಿದ್ದಾರೆ.ಈ ಬಗ್ಗೆ ಎಲ್ಲ ರೀತಿಯಲ್ಲೂ ಅಧಿಕಾರಿಗಳಿಗೆ ತಿಳಿಸಿದ್ದೇನೆ.ಕೋರ್ಟ್ ಗೂ ಹೋಗಿದ್ದೇನೆ.ಇದೀಗ ನ್ಯಾಯಕ್ಕಾಗಿ ಧರಣಿ ಮೊರೆ ಹೋಗಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.





