Home Crime ಉಡುಪಿ : ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿ ಪಲ್ಟಿ : ಇಬ್ಬರು ಮೃತ್ಯು :...

ಉಡುಪಿ : ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿ ಪಲ್ಟಿ : ಇಬ್ಬರು ಮೃತ್ಯು : ಹಲವರು ಅಸ್ವಸ್ಥ…!!

ಉಡುಪಿ: ಪ್ರವಾಸಿ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಿಗ್ಗೆ ಮಲ್ಪೆ ಹತ್ತಿರದ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ಮೃತರನ್ನು ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಎಂದು ಗುರುತಿಸಲಾಗಿದೆ. ದಿಶಾ (26) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಧರ್ಮರಾಜ್ ( 26) ಎಂಬವರು ಚಿಕಿತ್ಸೆಗೆ ಸ್ಪಂದಿಸಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ರೆಸಾರ್ಟ್ ಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10-15 ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಹಾಕಿಲ್ಲ ಎಂದು ತಿಳಿದುಬಂದಿದೆ.

ನೀರಿನಲ್ಲಿ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇದರಲ್ಲಿ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುಯತ್ತಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.