Home Karavali Karnataka ಉಡುಪಿ: ವಿದ್ಯಾಧರ ರಾವ್ ಜಲವಳ್ಳಿಗೆ ಯಕ್ಷ ಸಾಧಕ ಪ್ರಶಸ್ತಿ…!!

ಉಡುಪಿ: ವಿದ್ಯಾಧರ ರಾವ್ ಜಲವಳ್ಳಿಗೆ ಯಕ್ಷ ಸಾಧಕ ಪ್ರಶಸ್ತಿ…!!

ಉಡುಪಿ : ಇಂದ್ರಾಳಿ ಯಕ್ಷಗಾನ ಕೇಂದ್ರ ಆಶ್ರಯದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಉಜ್ವಲ್ ಡೆವಲಪರ್ಸ್ ಉಡುಪಿ ಸಹಯೋಗದಲ್ಲಿ ನೀಡುವ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ 2025ನೇ ಸಾಲಿನ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷ ಸಾಧಕ ಪ್ರಶಸ್ತಿಗೆ ಯಕ್ಷಗಾನ ವೇಷಧಾರಿ ವಿದ್ಯಾಧರ ರಾವ್ ಜಲವಳ್ಳಿ ಆಯ್ಕೆಯಾಗಿದ್ದಾರೆ.

10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡ ಪ್ರಶಸ್ತಿಯನ್ನು ಜುಲೈ 19ರ ಅಪರಾಹ್ನ 3 ಗಂಟೆಗೆ ಉಡುಪಿ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನದ ನಂತರ ಬಡಗುತಿಟ್ಟು ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.