Home Crime ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ಆತ್ಮಹತ್ಯೆಗೆ ಶರಣು…!!

ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ಆತ್ಮಹತ್ಯೆಗೆ ಶರಣು…!!

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ತನಿಖಾ ಪಿ.ಎಸ್‌.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55) ಎಂಬವರು ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೀರಪ್ಪ ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದವರಾಗಿದ್ದು, ಜುಲೈ 19ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿ ತೆರಳಿದ್ದರು. ಇಂದು ಸಂಜೆ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವುದು ತಿಳಿದುಬಂದಿರುತ್ತದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಬಂಟ್ವಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.