ಉಡುಪಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಉಡುಪಿ ಅಂಬಾಗಿಲು ನಿವಾಸಿ ವೀರಯೋಧ ಬ್ಯಾಟರಿ ಶ್ರೀ ವಸಂತ್ ಕುಂದರ್ ಅವರು ಹುಟ್ಟೂರು ಉಡುಪಿಗೆ ಆಗಮಿಸಿದ ಹಿನ್ನೆಲೆ, ಅವರಿಗೆ ಆತ್ಮೀಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ಉಡುಪಿ ಜನತೆಯ ಪರವಾಗಿ ವೀರಯೋಧರನ್ನು ಗೌರವಿಸಿ ಅಭಿನಂದಿಸಿದರು. ದೇಶ ಸೇವೆಯಲ್ಲಿ ನೀಡಿದ ಅವರ ಕೊಡುಗೆಯನ್ನು ಪ್ರಶಂಸಿಸಿ ಮುಂದಿನ ಜೀವನಕ್ಕೂ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ವೀರಯೋಧರಿಗೆ ಗೌರವ ಸಲ್ಲಿಸಿದರು.





